spot_img
Thursday, September 17, 2026
24.1 C
Hubballi

ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ಸ್ಪರ್ಧಿಗಳ ತಾಳ್ಮೆಯ ಕಟ್ಟೆ..!

ಬಿಗ್ ಬಾಸ್ ಕನ್ನಡ 12ರಲ್ಲಿ ಸತೀಶ್ ಅವರ ವಿಚಿತ್ರ ನಡವಳಿಕೆ ಮನೆ ಮಂದಿಗೆ ಕೋಪ ತಂದಿದೆ. ಆರು ಗಂಟೆ ಸ್ನಾನ ಮಾಡಿ ಸ್ಪರ್ಧಿಗಳ ತಾಳ್ಮೆಯ ಕಟ್ಟೆ ಒಡೆಸಿದ್ದಾರೆ. ಚಂದ್ರಪ್ರಭ ಅವರಿಗೆ ಕಿರಿಕಿರಿಯಾಗಿ ಗಾಜಿನ ಲೋಟ ಒಡೆದಿದ್ದಾರೆ. ತಮ್ಮ ಐಷಾರಾಮಿ ಜೀವನವನ್ನು ಬಿಗ್ ಬಾಸ್ ಮನೆಯಲ್ಲೂ ಮುಂದುವರೆಸುತ್ತಿರುವ ಸತೀಶ್ ಅವರ ಹಠಮಾರಿ ವರ್ತನೆಗೆ ಧನುಷ್ ಗೌಡ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಚಿತ್ರ ವಿಚಿತ್ರ ಸ್ಪರ್ಧಿಗಳು ಆಗಮಿಸಿದ್ದಾರೆ. ಅನೇಕ ಸ್ಪರ್ಧಿಗಳು ತಮ್ಮ ಪ್ರತಿಷ್ಠೆ ಮುಖ್ಯ ಎಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈಗ ದೊಡ್ಮನೆಯಲ್ಲಿ ಸತೀಶ್ ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಗಂಟೆ ಸ್ನಾನ ಮಾಡಿದ್ದಾರೆ! ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಅನೇಕರ ತಾಳ್ಮೆಯ ಕಟ್ಟೆ ಒಡೆದು ಹೋಗಿದೆ.

ಮನೆಯಲ್ಲಿ ನಡೆದಂತೆ ಬಿಗ್ ಬಾಸ್ ಮನೆಯಲ್ಲೂ ನಡೆದುಕೊಳ್ಳುತ್ತೇನೆ ಎಂದರೆ ಅದು ಸಾಧ್ಯವೇ ಇಲ್ಲ. ಇಲ್ಲಿ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ನಿಯಮಗಳಿಗೆ ತಕ್ಕಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹಲವು ಅಭ್ಯಾಸಗಳನ್ನು ಬಿಡಬೇಕಾಗುತ್ತದೆ. ಆದರೆ, ಸತೀಶ್ ಮಾತ್ರ ಇದ್ಯಾವುದಕ್ಕೂ ಸಿದ್ಧರಿಲ್ಲ.

ಸತೀಶ್ ಶ್ರೀಮಂತ ಜೀವನ ನಡೆಸಿಕೊಂಡು ಬಂದವರು. ಅವರು ಮನೆಯಲ್ಲಿದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಈಗ ದೊಡ್ಮನೆಗೆ ಅವರಿಗೆ ಕಷ್ಟ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಆ ರೀತಿ ಆಗುತ್ತಿಲ್ಲ. ಅಲ್ಲಿಯೂ ಅವರು ತಮಗೆ ಬೇಕಾದಂತೆ ವಾಸ ಮಾಡುತ್ತಿದ್ದಾರೆ.

ಸತೀಶ್ ಅವರು ಬಿಗ್ ಬಾಸ್ ಮನೆಯಲ್ಲಿ 4-6 ತಾಸುಗಳಷ್ಟು ಸ್ನಾನ ಮಾಡಿದ್ದಾರೆ. ಅವರ ಜೋಡಿ ಚಂದ್ರಪ್ರಭ ಅವರು ಬಾತ್​ರೂಂನಲ್ಲಿ ಕುಳಿತು ಕುಳಿತು ಸುಸ್ತಾಗಿದ್ದಾರೆ. ಇದನ್ನು ಅವರಿಂದ ತಡೆದುಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಈ ವಿಚಾರದಲ್ಲಿ ಅವರ ತಾಳ್ಮೆಯ ಕಟ್ಟೆ ಒಡೆದಿದೆ. ಬಾಯಾರಿಕೆ ಆದರೂ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡು  ಗಾಜಿನ ಲೋಟವನ್ನು ಬೀಸಿ ನೆಲಕ್ಕೆ ಎಸೆದಿದ್ದಾರೆ. ಇದರಿಂದ ಗಾಜಿನ ಲೋಟ ಒಡೆದು ಚೂರಾಗಿದೆ.

ಸತೀಶ್ ನಡೆದುಕೊಳ್ಳುತ್ತಿರುವ ರೀತಿ ಸರಿ ಇಲ್ಲ ಎಂದು ಮನೆಯ ಅನೇಕರು ಹೇಳಿದ್ದಾರೆ. ಆದರೆ, ಸತೀಶ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲೇ ಇಲ್ಲ. ‘ನಾನು ಇರೋದೇ ಹೀಗೆ. ನಾನು ಹೀಗೆಯೇ ನಡೆದುಕೊಳ್ಳೋದು’ ಎಂದು ಆವಾಜ್ ಹಾಕಿದ್ದಾರೆ. ಇದು ಅನೇಕರಿಗೆ ಬೇಸರ ಮೂಡಿಸಿದೆ. ಧನುಷ್ ಗೌಡ ಜಗಳಕ್ಕೆ ಮುಂದಾಗಿದ್ದಾರೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಈ ಮಾತಿನ ಚಕಮಕಿ ಸಾಗಿದೆ.

 

 

 

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!