spot_img
Wednesday, March 18, 2026
29.1 C
Hubballi

ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ಸ್ಪರ್ಧಿಗಳ ತಾಳ್ಮೆಯ ಕಟ್ಟೆ..!

ಬಿಗ್ ಬಾಸ್ ಕನ್ನಡ 12ರಲ್ಲಿ ಸತೀಶ್ ಅವರ ವಿಚಿತ್ರ ನಡವಳಿಕೆ ಮನೆ ಮಂದಿಗೆ ಕೋಪ ತಂದಿದೆ. ಆರು ಗಂಟೆ ಸ್ನಾನ ಮಾಡಿ ಸ್ಪರ್ಧಿಗಳ ತಾಳ್ಮೆಯ ಕಟ್ಟೆ ಒಡೆಸಿದ್ದಾರೆ. ಚಂದ್ರಪ್ರಭ ಅವರಿಗೆ ಕಿರಿಕಿರಿಯಾಗಿ ಗಾಜಿನ ಲೋಟ ಒಡೆದಿದ್ದಾರೆ. ತಮ್ಮ ಐಷಾರಾಮಿ ಜೀವನವನ್ನು ಬಿಗ್ ಬಾಸ್ ಮನೆಯಲ್ಲೂ ಮುಂದುವರೆಸುತ್ತಿರುವ ಸತೀಶ್ ಅವರ ಹಠಮಾರಿ ವರ್ತನೆಗೆ ಧನುಷ್ ಗೌಡ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಚಿತ್ರ ವಿಚಿತ್ರ ಸ್ಪರ್ಧಿಗಳು ಆಗಮಿಸಿದ್ದಾರೆ. ಅನೇಕ ಸ್ಪರ್ಧಿಗಳು ತಮ್ಮ ಪ್ರತಿಷ್ಠೆ ಮುಖ್ಯ ಎಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈಗ ದೊಡ್ಮನೆಯಲ್ಲಿ ಸತೀಶ್ ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಗಂಟೆ ಸ್ನಾನ ಮಾಡಿದ್ದಾರೆ! ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಅನೇಕರ ತಾಳ್ಮೆಯ ಕಟ್ಟೆ ಒಡೆದು ಹೋಗಿದೆ.

ಮನೆಯಲ್ಲಿ ನಡೆದಂತೆ ಬಿಗ್ ಬಾಸ್ ಮನೆಯಲ್ಲೂ ನಡೆದುಕೊಳ್ಳುತ್ತೇನೆ ಎಂದರೆ ಅದು ಸಾಧ್ಯವೇ ಇಲ್ಲ. ಇಲ್ಲಿ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ನಿಯಮಗಳಿಗೆ ತಕ್ಕಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹಲವು ಅಭ್ಯಾಸಗಳನ್ನು ಬಿಡಬೇಕಾಗುತ್ತದೆ. ಆದರೆ, ಸತೀಶ್ ಮಾತ್ರ ಇದ್ಯಾವುದಕ್ಕೂ ಸಿದ್ಧರಿಲ್ಲ.

ಸತೀಶ್ ಶ್ರೀಮಂತ ಜೀವನ ನಡೆಸಿಕೊಂಡು ಬಂದವರು. ಅವರು ಮನೆಯಲ್ಲಿದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಈಗ ದೊಡ್ಮನೆಗೆ ಅವರಿಗೆ ಕಷ್ಟ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಆ ರೀತಿ ಆಗುತ್ತಿಲ್ಲ. ಅಲ್ಲಿಯೂ ಅವರು ತಮಗೆ ಬೇಕಾದಂತೆ ವಾಸ ಮಾಡುತ್ತಿದ್ದಾರೆ.

ಸತೀಶ್ ಅವರು ಬಿಗ್ ಬಾಸ್ ಮನೆಯಲ್ಲಿ 4-6 ತಾಸುಗಳಷ್ಟು ಸ್ನಾನ ಮಾಡಿದ್ದಾರೆ. ಅವರ ಜೋಡಿ ಚಂದ್ರಪ್ರಭ ಅವರು ಬಾತ್​ರೂಂನಲ್ಲಿ ಕುಳಿತು ಕುಳಿತು ಸುಸ್ತಾಗಿದ್ದಾರೆ. ಇದನ್ನು ಅವರಿಂದ ತಡೆದುಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಈ ವಿಚಾರದಲ್ಲಿ ಅವರ ತಾಳ್ಮೆಯ ಕಟ್ಟೆ ಒಡೆದಿದೆ. ಬಾಯಾರಿಕೆ ಆದರೂ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡು  ಗಾಜಿನ ಲೋಟವನ್ನು ಬೀಸಿ ನೆಲಕ್ಕೆ ಎಸೆದಿದ್ದಾರೆ. ಇದರಿಂದ ಗಾಜಿನ ಲೋಟ ಒಡೆದು ಚೂರಾಗಿದೆ.

ಸತೀಶ್ ನಡೆದುಕೊಳ್ಳುತ್ತಿರುವ ರೀತಿ ಸರಿ ಇಲ್ಲ ಎಂದು ಮನೆಯ ಅನೇಕರು ಹೇಳಿದ್ದಾರೆ. ಆದರೆ, ಸತೀಶ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲೇ ಇಲ್ಲ. ‘ನಾನು ಇರೋದೇ ಹೀಗೆ. ನಾನು ಹೀಗೆಯೇ ನಡೆದುಕೊಳ್ಳೋದು’ ಎಂದು ಆವಾಜ್ ಹಾಕಿದ್ದಾರೆ. ಇದು ಅನೇಕರಿಗೆ ಬೇಸರ ಮೂಡಿಸಿದೆ. ಧನುಷ್ ಗೌಡ ಜಗಳಕ್ಕೆ ಮುಂದಾಗಿದ್ದಾರೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಈ ಮಾತಿನ ಚಕಮಕಿ ಸಾಗಿದೆ.

 

 

 

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...
spot_img

Related Articles

Popular Categories

spot_img
error: Content is protected !!