spot_img
Saturday, March 21, 2026
22.1 C
Hubballi

ಹಾವೇರಿಯಲ್ಲಿ ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ ಅಪಘಾತದ ನಾಟಕ: ಆರೋಪಿಗಳು ಅಂದರ್​

ಹಾವೇರಿ: ಜಮೀನು, ಮನೆ, ವಿಮೆ ಹಣಕ್ಕಾಗಿ ವ್ಯಕ್ತಿಯ‌ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಹೊರಟ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್​ 27ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಕೊಲೆ ಮಾಡಲಾಗಿತ್ತು.

38 ವರ್ಷದ ಬಸವರಾಜ್​ ಪುಟ್ಟಪ್ಪನವರ್ ಕೊಲೆಗೀಡಾದ ವ್ಯಕ್ತಿ. ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ ಮತ್ತು ಲೋಕೇಶ್​ ಆರೋಪಿಗಳು. ಈ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಆರಂಭದಲ್ಲಿ ಮೃತ ಬಸವರಾಜ್ ಸಾವಿನ ಬಗ್ಗೆ ಅವರ ಸಹೋದರ ಸಂಬಂಧಿ ಶಿವಕುಮಾರ್​ಗೆ ಸಂಶಯ ಬಂದಿತ್ತು. ಈ ಕುರಿತಂತೆ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಅವರು ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆ ನಡೆದು ಸತ್ಯಾಂಶ ಬೆಳಕಿಗೆ ಬಂದಿದೆ.

ಹತ್ಯೆಗೊಂಡಿರುವ ಬಸವರಾಜ್ ತಂದೆ – ತಾಯಿ ಹಾಗೂ ಸಹೋದರರು ನಿಧನ ಹೊಂದಿದ್ದರು. ಬಸವರಾಜ್​ ಒಬ್ಬಂಟಿಯಾಗಿ ಜೀವನ ಮಾಡುತ್ತಿದ್ದ. ಈತನಿಗೆ 8 ಎಕರೆ ಜಮೀನು, ಮನೆ ಇತ್ತು. ಹಾಗೇ ಆರೋಪಿಗಳೇ ಮೃತನಿಗೆ ಆಕ್ಸಿಡೆಂಟಲ್ ಇನ್ಶೂರೆನ್ಸ್ ಮಾಡಿಸಿದ್ದರು. ಈಗ ಅದರ ಅವಧಿ ಮುಗಿದುಕೊಂಡು ಬರುತ್ತಿದ್ದ ಹಿನ್ನೆಲೆ ವಿಮೆ​ ಕ್ಲೇಮ್ ಮಾಡಲು ಆರೋಪಿಗಳು ಈ ರೀತಿ ಪ್ಲ್ಯಾನ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 

ಪ್ರಕರಣ ವಿವರಿಸಿದ ಎಸ್ಪಿ ಯಶೋದಾ ವಂಟಗೋಡಿ: “ಸೆ. ​​27 ರಂದು ನಮ್ಮ ಸ್ಟೇಷನ್​ ರೋಡ್​ ರಟ್ಟಿಹಳ್ಳಿಯಲ್ಲಿ ಹಿಟ್​ ಆ್ಯಂಡ್​ ರನ್​ ಪ್ರಕರಣದ ತರಹ ಮೃತದೇಹ ಬಿದ್ದಿರುತ್ತದೆ. ಆತ ಬಸವರಾಜ್​ ಎಂದು ತಿಳಿದು ಬರುತ್ತದೆ. ಮೃತನ ಸಂಬಂಧಿ ಶಿವಕುಮಾರ್​ ಎಂಬುವವರು ಬಂದು ಹಿಟ್​ ಆ್ಯಂಡ್​ ರನ್​ ಆಗಿದೆ ಎಂದು ದೂರು ನೀಡಿದ್ದರು. ನಾವು ಪ್ರಕರಣ ದಾಖಲು ಮಾಡಿಕೊಂಡಿದ್ದೆವು. ಈ ಮಧ್ಯೆ ದೂರುದಾರ ಆತನ ಸಾವಿನಲ್ಲಿ ಅನುಮಾನವಿದೆ. ಆತನಿಗೆ 8 ಎಕರೆ ಜಾಗ ಹಾಗೂ ಇನ್ಶೂರೆನ್ಸ್​ ಇತ್ತು. ಆ ಕಾರಣಕ್ಕೆ ಯಾರೋ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದರು. ತಕ್ಷಣ ನಾವು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಾಗ ಅದು ಅಪಘಾತವಲ್ಲ ಕೊಲೆ ಎಂದು ಬೆಳಕಿಗೆ ಬರುತ್ತದೆ”.

“ಕಳೆದ ವರ್ಷ ಪ್ರಧಾನಿ ಮಂತ್ರಿ ಅವರ ಯೋಜನೆಯ 10 ಲಕ್ಷದ ಮೌಲ್ಯದ ಇನ್ಶೂರೆನ್ಸ್ ಅನ್ನು ಮೃತ ವ್ಯಕ್ತಿಗೆ ಆರೋಪಿಗಳೇ​ ಮಾಡಿಸಿದ್ದರು. ಅದು ಈ ತಿಂಗಳ 18ಕ್ಕೆ ಮುಗಿಯಲಿದೆ. ಮೃತನಿಗೆ ಮನೆ, ಜಮೀನು ಇತ್ತು. ಈತನಿಗೆ ತಂದೆ-ತಾಯಿ, ಇಬ್ಬರು ಅಣ್ಣಂದಿರೂ ಇದ್ದರು. ಆ 4 ಜನಗಳು 2 ವರ್ಷದ ಒಳಗೆ ಸತ್ತು ಹೋಗಿದ್ದಾರೆ. ಮೃತನಿಗೆ ಯಾರು ಇದ್ದಿರಲಿಲ್ಲ, ಮದುವೆ ಆಗಿರಲಿಲ್ಲ ಜತೆಗೆ ಕುಡಿಯುತ್ತಿದ್ದ. ಇದನ್ನೇ ಉಪಯೋಗಿಸಿಕೊಂಡಿದ್ದ ಆರೋಪಿಗಳು ಮೃತನ ಹತ್ತಿರ ಮನೆ, ಜಮೀನಿನ ವಿಲ್​ ಮಾಡಿಸಿಕೊಂಡಿದ್ದರು”.

“ಹಾಗೇ ಮಾಡಿಸಿದ್ದ ಇನ್ಶೂರೆನ್ಸ್​ ನಮಗೆ ಕ್ಲೈಮ್​​ ಆಗಬೇಕು ಅಂತಾ ಆರೋಪಿಗಳು ಪ್ಲ್ಯಾನ್​ ಮಾಡಿದ್ದರು. ಮೃತನು ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ. ಅಲ್ಲಿಂದ ಅವನನ್ನು ಡಿಸ್ಚಾರ್ಜ್​ ಮಾಡಿಸಿಕೊಂಡು ಬಂದ ಆರೋಪಿಗಳು ಆತ ಶೌಚ ಕೇಳಿದಾಗ ಮಧ್ಯ ರಸ್ತೆಯಲ್ಲಿ ಕೂರಿಸಿ ಹಿಂದಿನಿಂದ ವಾಹನ ತೆಗೆದುಕೊಂಡು ಜೋರಾಗಿ ಬಂದು ಆತನ ಮೇಲೆ ಹತ್ತಿಸಿಕೊಂಡು ಹೋಗಿದ್ದಾರೆ. ಅದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಎಸ್ಪಿ ಯಶೋದಾ ವಂಟಗೋಡಿ ವಿವರಿಸಿದ್ದಾರೆ.

ಇದೇ ತರಹದ ಪ್ರಕರಣ ಇತ್ತೀಚೆಗೆ ವಿಜಯನಗರದ ಹೊಸಪೇಟೆ ಹೊರವಲಯದಲ್ಲಿ ನಡೆದಿತ್ತು. ಆರೋಪಿಗಳು 5.25 ಕೋಟಿ ಇನ್ಶೂರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನಿಸಿ ಪೊಲೀಸರಿಗೆ ತಗಲಾಕಿಕೊಂಡಿದ್ದರು. ಈ ಪ್ರಕರಣದಲ್ಲಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮೃತನ ಹೆಸರಲ್ಲಿ 5.25 ಕೋಟಿ ರೂ. ಇನ್ಶೂರೆನ್ಸ್​ ಮಾಡಿಸಿದ್ದರು.

ಈ ಹಣವನ್ನು ಪಡೆಯುವ ಆಸೆಯಿಂದಾಗಿ ಮೊದಲು ಕೊಲೆ ಮಾಡಿ, ಬಳಿಕ ಹೊಸಪೇಟೆ ಹೊರವಲಯದ ಜಂಬುನಾಥ ಹಳ್ಳಿಗೆ ಹೋಗುವ ರಸ್ತೆಗೆ ಕರೆತಂದಿದ್ದರು. ಸೆಕೆಂಡ್ ಹ್ಯಾಂಡ್ ಎಕ್ಸೆಲ್ ಬೈಕ್​​ ಬಾಡಿಗೆಗೆ ತಂದು ಅದರ ಮೇಲೆ ಕೂರಿಸಿ ಕಾರಿನಿಂದ ಗುದ್ದಿಸಿ ಅಪಘಾತ ಎಂದು ಬಿಂಬಿಸಿದ್ದರು. ಆದರೆ ಆರೋಪಿಗಳ ಕೆಲ ಎಡವಟ್ಟಿನಿಂದ ಅದು ಕೊಲೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು...
spot_img

Related Articles

Popular Categories

spot_img
error: Content is protected !!