spot_img
Monday, July 20, 2026
21.1 C
Hubballi

ಹುಬ್ಬಳ್ಳಿ ಮಹಾನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದಿಂದ ಬೃಹತ್ ರಕ್ತದಾನ ಶಿಬಿರ..!

ಹುಬ್ಬಳ್ಳಿ:

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹುಬ್ಬಳ್ಳಿ ಮಹಾನಗರದಿಂದ ನವೆಂಬರ್ 9 ರಂದು ಬೃಹತ್ ರಕ್ತದಾನ ಶಿಬಿರವನ್ನು ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಭವಾನಿ ನಗರದ ರಾಯರಮಠದ ಶ್ರೀಸುಜಿಯೀಂದ್ರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಉತ್ತರ ಪ್ರಾಂತ ಉಪಾಧ್ಯಕ್ಷರಾದ ಗೋವರ್ಧನರಾವ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 41 ವರ್ಷಗಳಿಂದ ಭಜರಂಗದಳವು ಸೇವಾ, ಸುರಕ್ಷಾ, ಸಂಸ್ಕಾರದೊಂದಿಗೆ ಕಾರ್ಯ ಮಾಡುತ್ತಿದೆ. ಇದಲ್ಲದೇ ಯುವಕರಲ್ಲಿ ದೇಶಭಕ್ತಿ ಮೂಡಿಸುವ ಜೊತೆಗೆ ಮತಾಂತರ, ಲವ್ ಜಿಹಾದ್, ಗೋ ರಕ್ಷಣೆ ವಿಷಯವಾಗಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಇದೀಗ ಕೇಂದ್ರ ಸರ್ಕಾರ ಆರೋಗ್ಯದ ಬಗ್ಗೆ ಯುವಕ-ಯುವತಿಯರಲ್ಲಿ ಜಾಗೃತಿ ಮೂಡಿಸಲು ನಶೆಮುಕ್ತ ಭಾರತ ಕಾರ್ಯಕ್ರಮ ನಡೆಸುತ್ತಿದೆ. ಇದಕ್ಕೆ ಬೆಂಬಲವಾಗಿ ಬಜರಂಗದಳವು ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ಆರೋಗ್ಯಕ್ಕಾಗಿ ಓಟ, ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಭಾಷಣಗಳು, ಆರೋಗ್ಯ ಶಿಬಿರಗಳನ್ನು ನಡೆಸಲಿದೆ ಎಂದರು.

1990 ರಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಹೋರಾಟದಲ್ಲಿ ಮಡಿದ ಕರಸೇವಕರ ನೆನಪಿಗಾಗಿ ಬಲಿದಾನ ದಿವಸ ಮತ್ತು ಋಷಿ ದಧೀಚಿಯು ದೇವತೆಗಳ ರಕ್ಷಣೆಗಾಗಿ ರಾಕ್ಷಸರ ಸಂಹಾರಕ್ಕಾಗಿ ತನ್ನ ಬೆನ್ನು ಮೂಳೆಯನ್ನೇ ದಾನವಾಗಿ ನೀಡಿದ್ದಾರೆ. ಈ ಕಾರಣಕ್ಕಾಗಿ ಪ್ರತಿವರ್ಷ ದಧೀಚಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಈ ವರ್ಷವೂ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು, ನ.9 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಇದರಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದತ್ತಮೂರ್ತಿ ಕುಲಕರ್ಣಿ, ಚೇತನ್ ರಾವ್, ಪ್ರಶಾಂತ ನರಗುಂದ, ರಘು ಯಲ್ಲಕ್ಕನವರ ಇದ್ದರು.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!