spot_img
Thursday, September 17, 2026
24.1 C
Hubballi

ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿದೆ ಕರಾವಳಿಯ ವೈಭವ; ಆ 09 ರಂದು ಬೃಹತ್ ‘ತುಳುನಾಡ ಆಟಿ’ ಉತ್ಸವ

ಬೆಂಗಳೂರಿನಲ್ಲಿ ಆಟಿ ಸಂಭ್ರಮ: ರಾಜಧಾನಿಯಲ್ಲಿ ತುಳುನಾಡಿನ ವೈಭವವನ್ನು ಪಸರಿಸಲು ‘ಜೈ ತುಳುನಾಡ್ ಬೆಂಗಳೂರು (ರಿ.)’ ವತಿಯಿಂದ ಆಗಸ್ಟ್ 09 ರಂದು ಬಿಳೇಕಹಳ್ಳಿಯ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ಬೃಹತ್ ‘ತುಳುನಾಡ ಆಟಿ’ ಉತ್ಸವ ಆಯೋಜಿಸಲಾಗಿದೆ. ಯಕ್ಷಗಾನ, ಆಟಿ ಕಲೆಂಜಿ, ಜಾನಪದ ಆಟಗಳು, ಸಾಧಕರಿಗೆ ಸನ್ಮಾನ ಹಾಗೂ ಗಣ್ಯಾತಿಗಣ್ಯರ ಸಾನ್ನಿಧ್ಯದೊಂದಿಗೆ 10,000ಕ್ಕೂ ಹೆಚ್ಚು ಜನಸ್ತೋಮ ಈ ಸಾಂಸ್ಕೃತಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ.

ಕರಾವಳಿಯ ವಿಶಿಷ್ಟ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಆಚರಣೆಗಳನ್ನು ರಾಜಧಾನಿ ಬೆಂಗಳೂರಿನ ಜನಮಾನಸಕ್ಕೆ ಪರಿಚಯಿಸುವ ಸದುದ್ದೇಶದಿಂದ ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯು ಬೃಹತ್ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಂಡಿದೆ. ಬರುವ ಆಗಸ್ಟ್ 09, 2026 ರಂದು ಬೆಂಗಳೂರಿನ ಬಿಳೇಕಹಳ್ಳಿ ವಿಜಯ ಬ್ಯಾಂಕ್ ಕಾಲೋನಿಯಲ್ಲಿರುವ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ‘ತುಳುನಾಡ ಆಟಿ’ ಸಂಭ್ರಮವು ಅತ್ಯಂತ ವೈಭವದಿಂದ ಜರುಗಲಿದೆ. ತುಳುನಾಡಿನ ಮಣ್ಣಿನ ಸೊಗಡನ್ನು ಬಿಂಬಿಸುವ ಈ ಐತಿಹಾಸಿಕ ವೇದಿಕೆಯಲ್ಲಿ ಸುಮಾರು 10,000ಕ್ಕೂ ಅಧಿಕ ತುಳುನಾಡು ಮತ್ತು ಕರಾವಳಿ ಸಂಸ್ಕೃತಿ ಪ್ರೇಮಿಗಳು ಒಂದೇ ಕಡೆ ಸೇರುವ ನಿರೀಕ್ಷೆಯಿದೆ.

ದಿನಪೂರ್ತಿ ಕರಾವಳಿ ಕಲಾ ವೈಭವ ಮತ್ತು ಜಾನಪದ ಆಟಗಳು:
ಈ ಭವ್ಯ ಸಾಂಸ್ಕೃತಿಕ ಉತ್ಸವದ ಆಕರ್ಷಣೆಯಾಗಿ ತುಳುನಾಡಿನ ಅಪ್ಪಟ ಪರಂಪರೆಯನ್ನು ಸಾರುವ ವಿವಿಧ ಜನಪದ ಕಲಾಪ್ರದರ್ಶನಗಳು ನಡೆಯಲಿವೆ. ಕರಾವಳಿಯ ಜಾನಪದ ಕಲೆಗೆ ಮೆರುಗು ನೀಡುವ ಯಕ್ಷಗಾನ ಮತ್ತು ಸಾಂಪ್ರದಾಯಿಕ ಆಟಿ ಕಲೆಂಜಿ ಪ್ರದರ್ಶನಗಳು ಪ್ರಮುಖ ಕೇಂದ್ರಬಿಂದುವಾಗಿರಲಿವೆ. ಇದರೊಂದಿಗೆ ಉತ್ಸವದಲ್ಲಿ ಕರಾವಳಿಯ ಜಾನಪದ ಸೊಗಡಿನ ಕುಣಿತ ಭಜನೆ ಹಾಗೂ ಸಾಂಪ್ರದಾಯಿಕ ಆಟೋಟಗಳನ್ನು ಆಯೋಜಿಸಲಾಗಿದೆ. ಯುವ ಜನಾಂಗಕ್ಕೆ ತುಳು ಲಿಪಿ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ತಿಳಿಸಿಕೊಡುವ ಮತ್ತು ಅವರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳೂ ಈ ಸಂದರ್ಭದಲ್ಲಿ ನಡೆಯಲಿವೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!