spot_img
Thursday, September 17, 2026
24.1 C
Hubballi

ಬಸ್ ಪಾಸ್ ನಡೆಯಲ್ಲ ಎಂದು ಹೆದರಿಸಿ ವಿದ್ಯಾರ್ಥಿಗಳ ಹತ್ತಿರ ಹಣ ವಸೂಲಿ ಆರೋಪ:BRTS ಬಸ್ ದೊಡ್ಡ ದಂಧೆ ಬಯಲು

ಕಾಲೇಜು ವಿದ್ಯಾರ್ಥಿಗಳಿಗಾಗಿ ನೀಡಲಾಗಿರುವ ಬಸ್ ಪಾಸ್ ಇದ್ದರೂ,
“ಈ ಪಾಸ್ ನಡೆಯುವುದಿಲ್ಲ” ಎಂದು ಹೆದರಿಸಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿ-ಧಾರವಾಡ BRTS ‘ಚಿಗರಿ’ ಬಸ್‌ಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ಹಾಗಾದರೆ ವಿದ್ಯಾರ್ಥಿಗಳ ಬಳಿ ಹಣ ಕೇಳುತ್ತಿರುವುದು ಏಕೆ?
ಬಸ್ ಪಾಸ್ ಇದ್ದರೂ ಹೆಚ್ಚುವರಿ ಹಣ ವಸೂಲಿ ಮಾಡಲು ಸಿಬ್ಬಂದಿಗೆ ಅಧಿಕಾರ ಇದೆಯೇ?
ಈ ಆರೋಪದ ಬಗ್ಗೆ BRTS ಅಧಿಕಾರಿಗಳು ಏನು ಹೇಳುತ್ತಾರೆ?

ಕಾಲೇಜಿಗೆ ತೆರಳಲು ಪ್ರತಿನಿತ್ಯ ಬಸ್‌ನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳು ಕೈಯಲ್ಲಿ ಬಸ್ ಪಾಸ್ ಇದ್ದರೂ,
“ಈ ಪಾಸ್ ಇಲ್ಲಿ ನಡೆಯುವುದಿಲ್ಲ… ಹಣ ಕೊಡಿ” ಎಂದು ಹೇಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ
ಹಣ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದರೂ,
ಪಾಸ್ ಸ್ವೀಕರಿಸುವುದಿಲ್ಲ ಎಂದು ಹೆದರಿಸಿ ಹಣ ಪಡೆಯಲಾಗುತ್ತಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಂದ ನಿಯಮಬಾಹಿರವಾಗಿ ಹಣ ವಸೂಲಿ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೂ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ

ವಿದ್ಯಾರ್ಥಿಗಳು ಹೇಳುತ್ತಿರುವ ಪ್ರಕಾರ “ನಮ್ಮ ಬಳಿ ಬಸ್ ಪಾಸ್ ಇತ್ತು. ಆದರೆ ಪಾಸ್ ನಡೆಯುವುದಿಲ್ಲ ಎಂದು ಹೇಳಿ ಹಣ ಕೇಳಿದರು. ಹಣ ಇಲ್ಲ ಎಂದರೂ ಬಿಡಲಿಲ್ಲ” ನಮ್ಮ ಬಳಿ ನೂರು ಇನ್ನೂರು ರೂಪಾಯಿ ಅಧಿಕೃತ ದಾಖಲಾತಿ ಇಲ್ಲದೆ ಕಿತ್ತುಕೊಂಡಿದ್ದಾರೆ ಎಂದು ಆರೋಪವನ್ನು ಕೆಲವು ವಿದ್ಯಾರ್ಥಿಗಳು ಮಾಡಿದ್ದಾರೆ.

ಬಸ್ ಪಾಸ್‌ಗೆ ಸಂಬಂಧಿಸಿದ ನಿಯಮಗಳು ಏನೇ ಇರಲಿ,ಅದನ್ನು ಸ್ಪಷ್ಟವಾಗಿ ವಿದ್ಯಾರ್ಥಿಗಳಿಗೆ ತಿಳಿಸುವ ಜವಾಬ್ದಾರಿ ಸಾರಿಗೆ ಸಂಸ್ಥೆಯದ್ದು.ಪಾಸ್ ಮಾನ್ಯವಲ್ಲದಿದ್ದರೆ,
ಅದಕ್ಕೆ ಕಾರಣವೇನು?ಯಾವ ನಿಯಮದಡಿ ಪಾಸ್ ತಿರಸ್ಕರಿಸಲಾಗಿದೆ?
ವಿದ್ಯಾರ್ಥಿಯಿಂದ ಪಡೆಯಲಾಗುತ್ತಿರುವ ಹಣಕ್ಕೆ ಅಧಿಕೃತ ರಸೀದಿ ನೀಡಲಾಗುತ್ತಿದೆಯೇ?
ಈ ಎಲ್ಲಾ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನಿರ್ದೇಶಕರು ನೀಡಬೇಕಿದೆ

ಸಾರಿಗೆ ಸಂಸ್ಥೆಯ ಅಧಿಕೃತ ನಿಯಮಗಳ ಪ್ರಕಾರ ಪಾಸ್ ಮಾನ್ಯವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು.
ಪಾಸ್ ಮಾನ್ಯವಾಗಿದ್ದರೆ,
ವಿದ್ಯಾರ್ಥಿಯಿಂದ ಹೆಚ್ಚುವರಿ ಹಣ ಕೇಳಲು ಸಿಬ್ಬಂದಿಗೆ ಅಧಿಕಾರ ಇದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು.
ಪಾಸ್ ಅಮಾನ್ಯವಾಗಿದ್ದರೆ,
ಅದಕ್ಕೆ ಸಂಬಂಧಿಸಿದ ನಿಯಮ, ಕಾರಣ ಮತ್ತು ಪರ್ಯಾಯ ವ್ಯವಸ್ಥೆಯನ್ನು ವಿದ್ಯಾರ್ಥಿಗೆ ತಿಳಿಸಬೇಕಾಗುತ್ತದೆ.
ಆದರೆ ಯಾವುದೇ ಸಂದರ್ಭದಲ್ಲಿ ಬೆದರಿಕೆ, ಒತ್ತಡ ಅಥವಾ ರಸೀದಿ ಇಲ್ಲದೆ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪ ಸತ್ಯವಾಗಿದ್ದರೆ,
ಅದರ ಬಗ್ಗೆ ಇಲಾಖಾ ಮಟ್ಟದಲ್ಲಿ ತನಿಖೆ ನಡೆಸುವುದು ಅಗತ್ಯವಾಗಿದೆ

ಒಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪದ ಸತ್ಯಾಸತ್ಯತೆ ತನಿಖೆಯಿಂದಲೇ ಹೊರಬರಬೇಕಿದೆ.ವಿದ್ಯಾರ್ಥಿಗಳಿಂದ ನಿಯಮಬಾಹಿರವಾಗಿ ಹಣ ವಸೂಲಿ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೋ ಇಲ್ಲೋ ಎಂಬುದನ್ನ ಕಾದು ನೋಡಬೇಕಿದೆ

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!