spot_img
Friday, September 18, 2026
30.1 C
Hubballi

ಮರಳು ಲಾರಿ ಬಿಡಲು ₹30 ಸಾವಿರ ಲಂಚ ಆರೋಪ; ಹೆಡ್‌ಕಾನ್ಸ್ಟೇಬಲ್‌-ಹೋಮ್‌ಗಾರ್ಡ್ ಲೋಕಾಯುಕ್ತ ಬಲೆಗೆ

ಧಾರವಾಡ: ಮರಳು ಸಾಗಿಸುತ್ತಿದ್ದ ಲಾರಿಯನ್ನು ಹುಬ್ಬಳ್ಳಿ–ಧಾರವಾಡ ಅವಳಿ ನಗರ ವ್ಯಾಪ್ತಿಯಲ್ಲಿ ಯಾವುದೇ ತೊಂದರೆಯಿಲ್ಲದೆ ಸಂಚರಿಸಲು ಬಿಡಲು ಲಾರಿ ಚಾಲಕನಿಂದ ₹30 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ಪೊಲೀಸ್ ಹೆಡ್‌ಕಾನ್ಸ್ಟೇಬಲ್‌ ಹಾಗೂ ಓರ್ವ ಹೋಮ್‌ಗಾರ್ಡ್‌ನನ್ನು ಧಾರವಾಡ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬಂಧಿತರನ್ನು ಧಾರವಾಡ ನಗರ ಠಾಣೆಯ ಹೆಡ್‌ಕಾನ್ಸ್ಟೇಬಲ್ ಹಸನ್‌ಸಾಬ ನದಾಫ್ ಹಾಗೂ ಹೋಮ್‌ಗಾರ್ಡ್ ಇಕ್ಬಾಲ್ ನದಾಫ್ ಎಂದು ಗುರುತಿಸಲಾಗಿದೆ.

ಕೊಪ್ಪಳ ಮೂಲದ ಲಾರಿ ಚಾಲಕ ಹನುಮಂತ ಎಂಬುವವರು ಮರಳು ಸಾಗಿಸುತ್ತಿದ್ದ ಲಾರಿಯನ್ನು ಅವಳಿ ನಗರ ವ್ಯಾಪ್ತಿಯಲ್ಲಿ ಬಿಡಲು ₹30 ಸಾವಿರ ನೀಡಬೇಕು ಎಂದು ಆರೋಪಿಗಳು ಒತ್ತಾಯಿಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಣವನ್ನು ಫೋನ್‌ಪೇ ಮೂಲಕ ಪಾವತಿಸಲಾಗಿತ್ತು ಎಂದು ವರದಿಯಾಗಿದೆ. ಬಳಿಕ ಲಾರಿ ಚಾಲಕ ಧಾರವಾಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಸಹ ವಶಕ್ಕೆ ಪಡೆದು, ಹಣದ ವಹಿವಾಟು ಹಾಗೂ ಲಾರಿ ಚಾಲಕನೊಂದಿಗೆ ನಡೆದ ಸಂವಹನದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಇದೇ ರೀತಿಯಲ್ಲಿ ಬೇರೆ ಲಾರಿ ಚಾಲಕರಿಂದಲೂ ಹಣ ಪಡೆದಿದ್ದಾರೆಯೇ? ಎಂಬುದರ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ. ಪೊಲೀಸ್ ಇಲಾಖೆಯ ಸಿಬ್ಬಂದಿಯೇ ಲಂಚ ಸ್ವೀಕಾರದ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಧಾರವಾಡ ಪೊಲೀಸ್ ವಲಯದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

Hot this week

ಕೊಳೆತ ಕೊಬ್ಬರಿಯ ಅಕ್ರಮ ದಂಧೆ? ಜನರ ಆರೋಗ್ಯದ ಜೊತೆ ಚೆಲ್ಲಾಟದ ಆರೋಪ

ಹುಬ್ಬಳ್ಳಿ: ಕೊಳೆತ ಹಾಗೂ ಗುಣಮಟ್ಟ ಕಳೆದುಕೊಂಡ ಕೊಬ್ಬರಿಯನ್ನು ಸಂಗ್ರಹಿಸಿ, ವಿಂಗಡಿಸಿ ಅಕ್ರಮವಾಗಿ...

ಇಂದು ಈ 12 ರಾಶಿಗಳಿಗೆ ಹೇಗಿದೆ ದಿನ? ಉದ್ಯೋಗ, ಹಣ, ಕುಟುಂಬ ಮತ್ತು ವ್ಯವಹಾರದಲ್ಲಿ ಏನಿದೆ ಫಲ?

ಸೆಪ್ಟೆಂಬರ್ 18, 2026ರ ದಿನ ನಿಮ್ಮ ರಾಶಿಗೆ ಹೇಗಿರಲಿದೆ? ಉದ್ಯೋಗ, ವ್ಯವಹಾರ,...

Award For Farmer: ಕೃಷಿಯಲ್ಲಿ ನಿಮ್ಮ ಸಾಧನೆ ವಿಭಿನ್ನವಾಗಿದೆಯಾ? ಹಾಗಿದ್ರೆ ಈ ಪ್ರಶಸ್ತಿಗೆ ಇಂದೇ ಅರ್ಜಿ ಸಲ್ಲಿಸಿ!

ಧಾರವಾಡ: ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು...

Topics

ಕೊಳೆತ ಕೊಬ್ಬರಿಯ ಅಕ್ರಮ ದಂಧೆ? ಜನರ ಆರೋಗ್ಯದ ಜೊತೆ ಚೆಲ್ಲಾಟದ ಆರೋಪ

ಹುಬ್ಬಳ್ಳಿ: ಕೊಳೆತ ಹಾಗೂ ಗುಣಮಟ್ಟ ಕಳೆದುಕೊಂಡ ಕೊಬ್ಬರಿಯನ್ನು ಸಂಗ್ರಹಿಸಿ, ವಿಂಗಡಿಸಿ ಅಕ್ರಮವಾಗಿ...

ಇಂದು ಈ 12 ರಾಶಿಗಳಿಗೆ ಹೇಗಿದೆ ದಿನ? ಉದ್ಯೋಗ, ಹಣ, ಕುಟುಂಬ ಮತ್ತು ವ್ಯವಹಾರದಲ್ಲಿ ಏನಿದೆ ಫಲ?

ಸೆಪ್ಟೆಂಬರ್ 18, 2026ರ ದಿನ ನಿಮ್ಮ ರಾಶಿಗೆ ಹೇಗಿರಲಿದೆ? ಉದ್ಯೋಗ, ವ್ಯವಹಾರ,...

Award For Farmer: ಕೃಷಿಯಲ್ಲಿ ನಿಮ್ಮ ಸಾಧನೆ ವಿಭಿನ್ನವಾಗಿದೆಯಾ? ಹಾಗಿದ್ರೆ ಈ ಪ್ರಶಸ್ತಿಗೆ ಇಂದೇ ಅರ್ಜಿ ಸಲ್ಲಿಸಿ!

ಧಾರವಾಡ: ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು...

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ‘! ದೂರು-ಪ್ರತಿದೂರು ದಾಖಲು

ಉತ್ತರ ಕನ್ನಡ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ...

ಗದಗ ಜಿಲ್ಲೆಯಲ್ಲಿ ಭಾವೈಕ್ಯತೆಯ ಅಲೆ! ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸಿ ಮುಸ್ಲಿಂ ಯುವಕರಿಂದ ಪೂಜೆ

ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ...

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...
spot_img

Related Articles

Popular Categories

spot_img
error: Content is protected !!