ನವಲಗುಂದ:ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಶಾಸಕ ಕೋನರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ಬರದ ಪರಿಸ್ಥಿತಿ ತೀವ್ರವಾಗಿದ್ದು, ಇದೀಗ ಸರ್ಕಾರದ ಬರ ಘೋಷಣೆಯಿಂದ ರೈತರಿಗೆ ಪರಿಹಾರದ ನಿರೀಕ್ಷೆ ಮೂಡಿದೆ.
ಒಂದೆಡೆ ಮಳೆ ಕೈಕೊಟ್ಟಿತ್ತು ಮತ್ತೊಂದೆಡೆ ಬೆಳೆಗಳ ಮೇಲೆ ಬರದ ಛಾಯೆ ಆವರಿಸಿತ್ತು
ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು.. ಬಿತ್ತನೆ ಮಾಡಿದ ಬೆಳೆಗಳಿಗೆ ಸಮರ್ಪಕ ಮಳೆಯಾಗದಿರುವುದು ರೈತರ ಆತಂಕಕ್ಕೆ ಕಾರಣವಾಗಿತ್ತು..
ಮಳೆ ಬರುವ ನಿರೀಕ್ಷೆಯಲ್ಲಿ ರೈತರು ಆಕಾಶದತ್ತ ನೋಡುತ್ತಲೇ ಇದ್ದರು…
ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಇದೀಗ ರಾಜ್ಯ ಸರ್ಕಾರ ನವಲಗುಂದ–ಅಣ್ಣಿಗೇರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಸ್ವಲ್ಪ ಮಟ್ಟಿನ ನಿರಾಳತೆ ನೀಡಿದೆ.
ಒಟ್ಟಿನಲ್ಲಿ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿವೆ. ಇದೀಗ ಸರ್ಕಾರದ ಮುಂದಿರುವ ಸವಾಲು ಕೇವಲ ಘೋಷಣೆಗೆ ಸೀಮಿತವಾಗದೇ, ಬರದಿಂದ ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಅಗತ್ಯ ಪರಿಹಾರ ತಲುಪಿಸುವುದು. ಸರ್ಕಾರದ ನೆರವು ಎಷ್ಟು ಬೇಗ ರೈತರ ಕೈ ಸೇರುತ್ತದೆ ಅನ್ನೋದು ಕಾದು ನೋಡಬೇಕಿದೆ.




