spot_img
Thursday, September 17, 2026
28.1 C
Hubballi

ಅಕ್ರಮ ಮರಳು ಬಲು ಜೋರು… ಪೊಲೀಸರದ್ದೇ ಕಾರುಬಾರು?

ರಾಜ್ಯದಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಆದ್ರೆ, ಇಲ್ಲಿ ಮಾತ್ರ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಇಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ಮರಳು ಲಾರಿಗಳು ರಾಜಾರೋಷವಾಗಿ ಓಡಾಡ್ತಿವೆ… ಇತ್ತ ಲಾರಿಗಳನ್ನು ತಡೆಯಬೇಕಾದ ಪೊಲೀಸರ ಮೇಲೆಯೇ ಗಂಭೀರ ಆರೋಪ ಕೇಳಿ ಬಂದಿದೆ.

ರಸ್ತೆಯಲ್ಲಿ ಸಾಲು ಸಾಲಾಗಿ ಓಡಾಡುತ್ತಿರುವ ಮರಳು ಲಾರಿಗಳು… ನಿಯಮ ಉಲ್ಲಂಘನೆಯಾಗ್ತಿದೆಯಾ? ಅನುಮತಿ ಇಲ್ಲದೇ ಮರಳು ಸಾಗಿಸಲಾಗ್ತಿದೆಯಾ? ಅನ್ನೋ ಪ್ರಶ್ನೆ ಇದೀಗ ಸಾರ್ವಜನಿಕರಲ್ಲಿ ಮೂಡಿದೆ.
ಇದರ ಮಧ್ಯೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.ಮರಳು ಲಾರಿಗಳಿಗೆ ಮಾಮೂಲಿ ಕೂಡ ನೀಡಬೇಕು… ಅದಕ್ಕೂ ಹೊರತಾಗಿ ಹೈವೇಯಲ್ಲಿ ಪಾಸ್ ಆಗಲು ಪ್ರತಿ ಲಾರಿಗೆ ನೂರು ರೂಪಾಯಿ ಕೊಡಬೇಕು ಅನ್ನೋ ಆರೋಪ ಕೂಡ ಕೇಳಿ ಬಂದಿದೆ.

ಒಂದೆಡೆ ಅಕ್ರಮ ಮರಳು ಸಾಗಾಟದಿಂದ ಸರ್ಕಾರಕ್ಕೆ ರಾಜಸ್ವ ನಷ್ಟವಾಗ್ತಿದೆ ಅನ್ನೋ ಆರೋಪ. ಮತ್ತೊಂದೆಡೆ, ರಸ್ತೆ ಸುರಕ್ಷತೆಗೂ ಇದು ದೊಡ್ಡ ಸವಾಲಾಗಿದೆ. ಮರಳು ಲಾರಿಗಳು ನಿಯಮ ಮೀರಿ ಸಂಚರಿಸುತ್ತಿದ್ದರೆ, ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಜವಾಬ್ದಾರಿ ಯಾರದ್ದು?

ಪೊಲೀಸರು ವಾಹನಗಳನ್ನು ತಪಾಸಣೆ ಮಾಡ್ತಾರಾ? ದಾಖಲೆಗಳನ್ನು ಪರಿಶೀಲಿಸ್ತಾರಾ? ಅಕ್ರಮ ಮರಳು ಸಾಗಾಟ ಕಂಡುಬಂದರೆ ಪ್ರಕರಣ ದಾಖಲಿಸ್ತಾರಾ?ಅಥವಾ ಹಣ ಕೊಟ್ಟರೆ ಎಲ್ಲವೂ ಸರಿ ಅನ್ನೋ ವ್ಯವಸ್ಥೆ ನಡೆಯುತ್ತಿದೆಯಾ? ಎಂಬುದು ಸಾರ್ವಜನಿಕರಲ್ಲಿ ಪ್ರಶ್ನೆಯಾಗಿಯೇ ಉಳದಿದೆ..

ಈ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕಿದೆ.ಮರಳು ಲಾರಿಗಳಿಂದ ಯಾವುದೇ ರೀತಿಯ ಅನಧಿಕೃತ ಹಣ ವಸೂಲಿ ನಡೆಯುತ್ತಿದೆಯಾ? ನಡೆಯುತ್ತಿದ್ದರೆ ಯಾರ ಸೂಚನೆಯ ಮೇರೆಗೆ?
ಪ್ರತಿ ಲಾರಿಗೆ ಎಷ್ಟೆಷ್ಟು ರೂಪಾಯಿ ಮಾಮೂಲಿ ಪಡೆಯಲಾಗುತ್ತಿದೆ ಅನ್ನೋ ಆರೋಪಕ್ಕೆ ಆಧಾರವೇನು? ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕಾಗಿದೆ.

ಒಟ್ಟಿನಲ್ಲಿ ಕೊಪ್ಪಳ, ಗದಗ, ನರಗುಂದ ನವಲಗುಂದ ಹುಬ್ಬಳ್ಳಿ ಸಿಟಿ ಹುಬ್ಬಳ್ಳಿ ಗ್ರಾಮೀಣ ಭಾಗದ ಪೊಲೀಸ್ ಠಾಣೆ ದಾಟಿ ಅವಳಿ ನಗರದ ಜನರಿಗೆ ತಲುಪುತ್ತಿದೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕಾದ ವ್ಯವಸ್ಥೆಯಲ್ಲೇ ಅಕ್ರಮ ವಸೂಲಿ ನಡೆಯುತ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ ಪ್ರತಿ ಠಾಣೆಗೂ ಒಂದು ಲಾರಿಯಿಂದ ಎಷ್ಟು ಮಾಮೂಲಿ ಪೋಲೀಸರ ಕೈ ಸೇರ್ತಾ ಇದೆ ಇದು ಅತ್ಯಂತ ಗಂಭೀರ ವಿಚಾರ. ಹೀಗಾಗಿ ಪೊಲೀಸ್ ಇಲಾಖೆ ಕೂಡಲೇ ತನಿಖೆ ನಡೆಸಿ ಸತ್ಯ ಏನು ಅನ್ನೋದನ್ನ ಜನರ ಮುಂದೆ ಸ್ಪಷ್ಟಪಡಿಸಬೇಕಿದೆ…

Hot this week

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

Topics

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...
spot_img

Related Articles

Popular Categories

spot_img
error: Content is protected !!