spot_img
Thursday, September 17, 2026
24.1 C
Hubballi

ಸ್ಪೀಡ್ ತೋರಿಸಲು ಹೋದ ಚಾಲಕನಿಗೆ ವಿಧಿಯ ಹೊಡೆತ; ಲೈವ್‌ನಲ್ಲೇ ಸಾ*ವು

ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡುವ ಹುಚ್ಚಾಟವೊಂದು ದುರಂತಕ್ಕೆ ಕಾರಣವಾಗಿದೆ. ರಾಜಸ್ಥಾನದ ಟೋಂಕ್ ಜಿಲ್ಲೆಯ ದಿಯೋಲಿ–ಟೋಂಕ್ ಹೆದ್ದಾರಿಯ ಪಾಲಿಯಾಡಾ ಬಳಿ ಗಂಟೆಗೆ ಬರೋಬ್ಬರಿ 198 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಾ ಫೇಸ್‌ಬುಕ್ ಲೈವ್ ಮಾಡುತ್ತಿದ್ದ 41 ವರ್ಷದ ರಾಜಾರಾಮ್ ಜಾಟ್ ಎಂಬುವವರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಕೊನೆಯ ಕ್ಷಣಗಳ ದೃಶ್ಯವೂ ಲೈವ್ ವಿಡಿಯೋದಲ್ಲಿ ಸೆರೆಯಾಗಿದೆ.

ಮಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜನಕ್‌ಪುರ ತೋರ್ಡಿ ಗ್ರಾಮದ ನಿವಾಸಿಯಾಗಿದ್ದ ರಾಜಾರಾಮ್ ರೈತರಾಗಿದ್ದರು. ಇಬ್ಬರು ಮಕ್ಕಳ ತಂದೆಯಾಗಿದ್ದ ಅವರು, ಮಂಗಳವಾರ ಮುಂಜಾನೆ ದಿಯೋಲಿಯಿಂದ ಟೋಂಕ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮೊಬೈಲ್‌ನಲ್ಲಿ ಫೇಸ್‌ಬುಕ್ ಲೈವ್ ಆರಂಭಿಸಿ, ಕಾರಿನ ವೇಗವನ್ನು ತೋರಿಸುತ್ತಿದ್ದರು. ಲೈವ್‌ನಲ್ಲಿ ಸ್ಪೀಡೋಮೀಟರ್ 197ರಿಂದ 198 ಕಿ.ಮೀ ವೇಗ ತಲುಪಿರುವುದು ಗೋಚರಿಸಿತ್ತು ಎಂದು ವರದಿಯಾಗಿದೆ.

ಪಾಲಿಯಾಡಾ ಸಮೀಪಿಸುತ್ತಿದ್ದಂತೆ ಅತಿವೇಗದಿಂದ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದು, ಮುಂಭಾಗದಲ್ಲಿದ್ದ ಡಂಪರ್ ಟ್ರಕ್‌ಗೆ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಾಜಾರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ರೀಲ್ಸ್, ಲೈವ್ ವಿಡಿಯೋ ಹಾಗೂ ವೇಗದ ಪ್ರದರ್ಶನಕ್ಕಾಗಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಹಾಗೂ ಅತಿವೇಗ ಎರಡೂ ಅಪಾಯಕಾರಿ ಎಂದು ಪೊಲೀಸರು ಎಚ್ಚರಿಸಿದ್ದು, ಹೆದ್ದಾರಿಗಳಲ್ಲಿ ಸ್ಪೀಡ್ ಗನ್ ಮತ್ತು ಕ್ಯಾಮೆರಾಗಳ ಮೂಲಕ ನಿಗಾ ಮತ್ತಷ್ಟು ಬಿಗಿಗೊಳಿಸುವುದಾಗಿ ತಿಳಿಸಿದ್ದಾರೆ. ಕೆಲವೇ ಸೆಕೆಂಡ್‌ಗಳ ಲೈವ್‌ಗಾಗಿ ಬದುಕನ್ನೇ ಕಳೆದುಕೊಳ್ಳುವ ಸ್ಥಿತಿ ಬರಬಾರದು ಎಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!