spot_img
Monday, July 20, 2026
21.5 C
Hubballi

ಬಿಗ್ ಬಾಸ್ ಮನೆಗೆ ಬೀಗ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಾರ್ಯಕ್ರಮದ ಸ್ಟುಡಿಯೋವನ್ನು ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮ ಉಲ್ಲಂಘನೆ ಆರೋಪದ ಮೇಲೆ ಸರ್ಕಾರ ಮುಚ್ಚಿತ್ತು. ಆದರೆ, ಈಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ, ಕಾರ್ಯಕ್ರಮದ ಪುನಾರಂಭಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಜಾಲಿವುಡ್ ಸ್ಟುಡಿಯೋಸ್‌ಗೆ ಒಂದು ಬಾರಿ ಅನುಮತಿ ನೀಡುವಂತೆ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. “ತಪ್ಪು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕೊಡಿ. ಉದ್ಯೋಗ ಮುಖ್ಯ, ಮನರಂಜನೆಯೂ ಮುಖ್ಯ. ಖಾಸಗಿಯವರು ಹೂಡಿಕೆ ಮಾಡಿದ್ದಾರೆ, ಅವರಿಗೆ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶ ನೀಡಬೇಕು,” ಎಂದು ಹೇಳಿದರು.

ಜಾಲಿವುಡ್ ಸ್ಟುಡಿಯೋದವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ನಿಯಮಗಳನ್ನು ಪಾಲಿಸದ ಕಾರಣಕ್ಕೆ ನೋಟಿಸ್ ಪಡೆದಿದ್ದರು. ಈ ಕುರಿತು ಶಿವಕುಮಾರ್, “ಕೆಲವರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ನಾನೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿ, ಕಾನೂನಾತ್ಮಕ ಸಮಸ್ಯೆ ಇದ್ದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ಸೂಚಿಸಿದ್ದೇನೆ,” ಎಂದರು.

“ಬಿಗ್ ಬಾಸ್ ಆಗಲಿ, ಯಾವುದೇ ಕಾರ್ಯಕ್ರಮವಾಗಲಿ, ಮನರಂಜನೆ ಜನರಿಗೆ ಬೇಕು. ಖಾಸಗಿಯವರು ಹೂಡಿಕೆ ಮಾಡಿ ತಪ್ಪು ಮಾಡಿರಬಹುದು, ಆದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶ ಕೊಡಬೇಕು,” ಎಂದು ಡಿಕೆ ಶಿವಕುಮಾರ್ ಅವರು ತಮ್ಮ ಸಲಹೆಯನ್ನು ನೀಡಿದರು. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ತಾವೇ ಮಾಡಿದ್ದಾಗಿ ನೆನಪಿಸಿದ ಅವರು, “ಅಲ್ಲಿ ಏನಾಗಿದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಉದ್ಯೋಗ ಸೃಷ್ಟಿಯೂ ಮುಖ್ಯ. ಆದ್ದರಿಂದ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿದ್ದೇನೆ,” ಎಂದರು.

ಜೆಡಿಎಸ್‌ಗೆ ಡಿಕೆಎಸ್‌ನಿಂದ ತಿರುಗೇಟು

ಜೆಡಿಎಸ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯದ ಬಗ್ಗೆ ಎಕ್ಸ್‌ನಲ್ಲಿ “ನಟ್ಟು ಬೋಲ್ಟ್ ಟೈಟ್” ಎಂದು ವ್ಯಂಗ್ಯವಾಡಿರುವ ಬಗ್ಗೆ ಕೇಳಿದಾಗ, ಶಿವಕುಮಾರ್ ತಿರುಗೇಟು ನೀಡಿದರು. “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿಯವರಾದರೂ ಆಗಲಿ, ಯಾರನ್ನಾದರೂ ಕರೆದುಕೊಂಡಾದರೂ ಆಗಲಿ, ಮಾಡಿಕೊಳ್ಳಲಿ,” ಎಂದು ವ್ಯಂಗ್ಯವಾಡಿದರು. “ಜೆಡಿಎಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ನನ್ನ ಹೆಸರನ್ನು ಪ್ರತಿದಿನ ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ, ನೆಮ್ಮದಿ, ಶಕ್ತಿ ಏನೂ ಬರುವುದಿಲ್ಲ,” ಎಂದು ಲೇವಡಿ ಮಾಡಿದರು.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!