spot_img
Monday, July 20, 2026
21.1 C
Hubballi

ಧಾರವಾಡ: ಪಾರ್ಕ್‌ನಲ್ಲಿ ವಾಕ್‌ ಮಾಡಲೂ ಅನುಮತಿ ಬೇಕಾ?: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಧಾರವಾಡ (ನ.5): ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ನಿರ್ಬಂಧಿಸಿದ ವಿಚಾರವಾಗಿ ಧಾರವಾಡದ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯು ಮಂಗಳವಾರ ದ್ವಿಸದಸ್ಯ ಪೀಠದಲ್ಲಿ ನಡೆದಿದ್ದು, ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಬೇಕೆನ್ನುವ ಸರ್ಕಾರದ ಆದೇಶದ ವಿರುದ್ಧ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ, ವಿ.ಕೆ.ಫೌಂಡೇಶನ್, ಧಾರವಾಡದ ರಾಜೀವ್ ಮಲ್ಹಾರ ಕುಲಕರ್ಣಿ, ಬೆಳಗಾವಿಯ ಬೌದ್ಧ ಪ್ರಚಾರಕಿ ಉಮಾ ಚವ್ಹಾಣ ಎಂಬುವರು ಅ.24ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಅ.28ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮಂಗಳವಾರ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಮತ್ತು ಗೀತಾ ಕೆ.ಬಿ ಅವರ ಎದುರು ವಾದ ಆರಂಭಿಸಿದ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಅರ್ಜಿ ಸಲ್ಲಿಸಿದವರ ಪೈಕಿ ಇಬ್ಬರು ಖಾಸಗಿ ಸಂಸ್ಥೆಗಳನ್ನು ಹೊಂದಿದ್ದಾರೆ. ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಆದೇಶ ಮಾಡಿದ್ದು, ತಡೆಯಾಜ್ಞೆ ತೆರವುಗೊಳಿಸಿ ಎಂದು ಮನವಿ ಮಾಡಿದರು.

ಸಾರ್ವಜನಿಕ ಸ್ಥಳದಲ್ಲಿ 10 ಜನರು ಸೇರಿದರೆ ಅನುಮತಿ ಬೇಕಾ?

ಆಗ ಪೀಠವು, ‘ಸಾರ್ವಜನಿಕ ಸ್ಥಳದಲ್ಲಿ 10 ಜನರು ಸೇರಿದರೆ ಅನುಮತಿ ಬೇಕಾ? ಅದರ ಅವಶ್ಯಕತೆ ಇದೆಯಾ? ಕೆಲವರು ಪಾರ್ಕ್‌ಗಳಲ್ಲಿ ವಾಕ್ ಮಾಡುತ್ತಾರೆ. ಅದಕ್ಕೂ ಕೂಡ ಅನುಮತಿ ಬೇಕಾ?’ ಎಂದು ಪ್ರಶ್ನಿಸಿತು. ರಸ್ತೆ, ಪಾರ್ಕ್‌ಗಳು ಸಾರ್ವಜನಿಕರ ಓಡಾಟ ಇದ್ದು, ಅವರಿಗೆ ಉಪಯೋಗವಾಗಬೇಕು. ಖಾಸಗಿಯವರು ಕಾರ್ಯಕ್ರಮ ಮಾಡುವುದಾದರೆ ಸ್ಥಳ ಬಾಡಿಗೆ ಪಡೆದು ಮಾಡಬಹುದು ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಮಜಾಯಿಸಿ ನೀಡಿದರು.

 

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!