spot_img
Thursday, September 17, 2026
24.1 C
Hubballi

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನ ಪರಿಷತ್​​ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​​ 17: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್​​ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ..

ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ ಪ್ರಕಾರ ಕಮರ್ಷಿಯಲ್​​ ವಾಹನಗಳಿಗೆ 5 ವರ್ಷ ವಿನಾಯಿತಿ ನೀಡಲಾಗಿದೆ. ಆದರೆ ಸರ್ಕಾರಿ ವಾಹನಗಳನ್ನು ಬಳಸುವಂತಿಲ್ಲ. ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ತಮಿಳುನಾಡಿನಲ್ಲಿ‌ ಕೆಲವೊಂದು ವಾಹನಗಳಿಗೆ‌ ವಿನಾಯ್ತಿ‌ಕೇಳಿದ್ದಾರೆ. ಅದೇ‌ ರೀತಿ ಅಗ್ನಿಶಾಮಕ ಇಲಾಖೆಯಲ್ಲಿ‌ ಕಡಿಮೆ ಬಳಕೆಯಾದ ವಾಹನಗಳಿವೆ. ಅಂತಹ ವಾಹನಗಳಿಗೆ‌ ವಿನಾಯಿತಿ‌ ಕೋರಿ ನಾವು ಕೂಡ‌ ಪತ್ರ ಬರೆದಿದ್ದೇವೆ. 15 ವರ್ಷ ಮೀರಿದ ಬಸ್ ಗಳು ನಿಗಮದಲ್ಲಿ‌ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಾಹನ ಗುಜರಿ ನೀತಿ ಏನು?

ಹಳೆಯ, ಹೆಚ್ಚು ಮಾಲಿನ್ಯ ಮಾಡುವ ವಾಹನಗಳನ್ನು ಹಂತ ಹಂತವಾಗಿ ತೆಗೆದುಹಾಕಲು, ಪರಿಸರವನ್ನು ಸುಧಾರಿಸಲು ಮತ್ತು ವಾಹನ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಾಹನ ಗುಜರಿ ನೀತಿ ಜಾರಿಗೆ ಬಂದಿದೆ. 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕೋದು ಕಡ್ಡಾಯವಾಗಿದೆ. ಆದರೆ 20 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಫಿಟ್‌ನೆಸ್ ಟೆಸ್ಟ್ ಕಡ್ಡಾಯವಾಗಿದ್ದು, ಇದರಲ್ಲಿ ಉತ್ತೀರ್ಣವಾಗದ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮವಿದೆ. ಗುಜರಿ ಹಾಕಿದವರಿಗೆ ಹೊಸ ವಾಹನ ಖರೀದಿಯಲ್ಲಿ ತೆರಿಗೆ ವಿನಾಯಿತಿ ಮತ್ತು ಪ್ರೋತ್ಸಾಹ ಧನ ಕೂಡ ಸಿಗಲಿದೆ.

ಇನ್ನು ಮಾಹಿತಿಯ ಪ್ರಕಾರ ಕರ್ನಾಟಕದ ಬೆಂಗಳೂರೊಂದರಲ್ಲೇ 15 ವರ್ಷ ಮೀರಿದ 37,45,339 ವಾಹನಗಳು ಇವೆ. ಆ ಪೈಕಿ ಬೈಕ್​​ಗಳ ಸಂಖ್ಯೆ 24,46,372 ಇದ್ದರೆ, ಕಾರುಗಳ ಸಂಖ್ಯೆ 7,059,39, ಲಾರಿ, ಬಸ್​ ಸೇರಿದಂತೆ ಇತರೆ ವಾಹನಗಳ ಸಂಖ್ಯೆ 5,93,028ರಷ್ಟಿವೆ ಎನ್ನಲಾಗಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!