spot_img
Monday, July 20, 2026
21.6 C
Hubballi

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನ ಪರಿಷತ್​​ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​​ 17: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್​​ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ..

ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ ಪ್ರಕಾರ ಕಮರ್ಷಿಯಲ್​​ ವಾಹನಗಳಿಗೆ 5 ವರ್ಷ ವಿನಾಯಿತಿ ನೀಡಲಾಗಿದೆ. ಆದರೆ ಸರ್ಕಾರಿ ವಾಹನಗಳನ್ನು ಬಳಸುವಂತಿಲ್ಲ. ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ತಮಿಳುನಾಡಿನಲ್ಲಿ‌ ಕೆಲವೊಂದು ವಾಹನಗಳಿಗೆ‌ ವಿನಾಯ್ತಿ‌ಕೇಳಿದ್ದಾರೆ. ಅದೇ‌ ರೀತಿ ಅಗ್ನಿಶಾಮಕ ಇಲಾಖೆಯಲ್ಲಿ‌ ಕಡಿಮೆ ಬಳಕೆಯಾದ ವಾಹನಗಳಿವೆ. ಅಂತಹ ವಾಹನಗಳಿಗೆ‌ ವಿನಾಯಿತಿ‌ ಕೋರಿ ನಾವು ಕೂಡ‌ ಪತ್ರ ಬರೆದಿದ್ದೇವೆ. 15 ವರ್ಷ ಮೀರಿದ ಬಸ್ ಗಳು ನಿಗಮದಲ್ಲಿ‌ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಾಹನ ಗುಜರಿ ನೀತಿ ಏನು?

ಹಳೆಯ, ಹೆಚ್ಚು ಮಾಲಿನ್ಯ ಮಾಡುವ ವಾಹನಗಳನ್ನು ಹಂತ ಹಂತವಾಗಿ ತೆಗೆದುಹಾಕಲು, ಪರಿಸರವನ್ನು ಸುಧಾರಿಸಲು ಮತ್ತು ವಾಹನ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಾಹನ ಗುಜರಿ ನೀತಿ ಜಾರಿಗೆ ಬಂದಿದೆ. 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕೋದು ಕಡ್ಡಾಯವಾಗಿದೆ. ಆದರೆ 20 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಫಿಟ್‌ನೆಸ್ ಟೆಸ್ಟ್ ಕಡ್ಡಾಯವಾಗಿದ್ದು, ಇದರಲ್ಲಿ ಉತ್ತೀರ್ಣವಾಗದ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮವಿದೆ. ಗುಜರಿ ಹಾಕಿದವರಿಗೆ ಹೊಸ ವಾಹನ ಖರೀದಿಯಲ್ಲಿ ತೆರಿಗೆ ವಿನಾಯಿತಿ ಮತ್ತು ಪ್ರೋತ್ಸಾಹ ಧನ ಕೂಡ ಸಿಗಲಿದೆ.

ಇನ್ನು ಮಾಹಿತಿಯ ಪ್ರಕಾರ ಕರ್ನಾಟಕದ ಬೆಂಗಳೂರೊಂದರಲ್ಲೇ 15 ವರ್ಷ ಮೀರಿದ 37,45,339 ವಾಹನಗಳು ಇವೆ. ಆ ಪೈಕಿ ಬೈಕ್​​ಗಳ ಸಂಖ್ಯೆ 24,46,372 ಇದ್ದರೆ, ಕಾರುಗಳ ಸಂಖ್ಯೆ 7,059,39, ಲಾರಿ, ಬಸ್​ ಸೇರಿದಂತೆ ಇತರೆ ವಾಹನಗಳ ಸಂಖ್ಯೆ 5,93,028ರಷ್ಟಿವೆ ಎನ್ನಲಾಗಿದೆ.

Hot this week

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

Topics

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ…!

Hubli: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ,...

ನವಲಗುಂದ ಟ್ಯಾಕ್ಸಿ ಸಂಘದ ಪ್ರತಿಭಟನೆಗೆ ದೇವರಾಜ ದಾಡಿಬಾವಿ ಬೆಂಬಲ..!

ನವಲಗುಂದ, ಜುಲೈ 6: ಟ್ಯಾಕ್ಸಿ ನಿಲ್ದಾಣಕ್ಕೆ ಶಾಶ್ವತ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ...

ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ...

ನಾಳೆ ಅಕ್ಕಿ ಆಲೂರು ಗ್ರಾಮದ ಮಠದ ದೇವಾಲಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಶ್ರೀಶೈಲ ಶಾಖಾ...

ಹುಬ್ಬಳ್ಳಿಯ income tax ಕಚೇರಿ ಬಳಿ ಭೀಕರ ರಸ್ತೆ ಅಪಘಾತ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ:ನಗರದ incometax ಕಚೇರಿಯ ಮುಂದೆ ಡೀಸೆಲ್ ಟ್ಯಾಂಕರ್ ಹಾಗೂ ಸ್ಕೂಟಿ ನಡುವೆ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...
spot_img

Related Articles

Popular Categories

spot_img
error: Content is protected !!