ಮನೆ ಹಂಚಿಕೆ ಕಾರ್ಯಕ್ರಮದ ಮುಖ್ಯ ವೇದಿಕೆಯ ಆವರಣ ಹುಬ್ಬಳ್ಳಿಯಲ್ಲಿ ಘಟನೆ
ಕಟೌಟ್ ಅಡಿಯಲ್ಲಿ ಸಿಲುಕಿ ಮೂವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.
ಅದೃಷ್ಟವಶಾತ್ ರಕ್ಷಣೆ ಮಾಡಿ ಹತ್ತಕ್ಕೂ ಹೆಚ್ಚು ಪೊಲೀಸರು ಕಟೌಟ್ ಬಿದ್ದ ಜಾಗದಿಂದ ಕೇವಲ ಕೆಲವೇ ಅಡಿಗಳ ಅಂತರದಲ್ಲಿದ್ದರು.
ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಭದ್ರತೆ ಮತ್ತು ಆಯೋಜನೆಯಲ್ಲಿನ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ:- ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆಯಲಿರುವ ಮನೆಗಳ ಹಂಚಿಕೆ ಕಾರ್ಯಕ್ರಮದ ವೇದಿಕೆ ಬಳಿ ಬೃಹತ್ ಕಟೌಟೊಂದು ಮುರಿದು ಬಿದ್ದು ಆಗಬಹುದಾದ ದೊಡ್ಡ ದುರಂತ ತಪ್ಪಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಪೋಟೋ ಇರುವ ಬೃಹತ್ ಕಟೌಟ್ ಮುರಿದು ಬಿದ್ದ ಕಾರಣಕ್ಕೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು.ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮದ ಉಸ್ತುವಾರಿಗೆ ಇದ್ದಂತಹ ಕೆಲವು ಅಧಿಕಾರಿಗಳೂ ಸಹ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ…




