spot_img
Monday, March 16, 2026
35.7 C
Hubballi

ರಾಜ್ಯದ ಮರಳು ಸಂಪತ್ತು “Illegal sand mining” ದಂಧೆಕೋರರ ಪಾಲು, ಸರಕಾರದ ಮೌನ ನಡೆ,ಬೊಕ್ಕಸನಷ್ಟಕ್ಕೆ ಹೊಣೆ ಯಾರು?

ಹಾವೇರಿ :ರಾಜ್ಯದಲ್ಲಿ ಮರಳು ಗಣಿಗಾರಿಕೆ ಕಳೆದ 15 ವರ್ಷಗಳಿಂದ ನದಿ ಮತ್ತು ಹಳ್ಳಕೊಳ್ಳದ ಪಾತ್ರದಲ್ಲಿ ಸರ್ಕಾರದ ಅನುಮತಿ ಇಲ್ಲದೆ ನಡೆಯುತ್ತಿದ್ದು ಅದು ಇತ್ತೀಚಿಗೆ ಅತಿ ಹೆಚ್ಚಾಗಿ ಕಂಡುಬರುತ್ತಿದೆ, ಇದಕ್ಕೆ ಸರ್ಕಾರದ ಮೌನ ವಹಿಸಿರುವುದು ಯಾವ ಕಾರಣಕ್ಕೆ ಅನ್ನೋದು ಈಗ ಯಕ್ಷಪ್ರಶ್ನೆಯಾಗಿ ಉಳಿದಿದೆ.

ಕರ್ನಾಟಕದಲ್ಲಿ 2020ರ ಹೊಸ ಮರಳು ನೀತಿಅಡಿ ಗ್ರಾಪಂ ವ್ಯಾಪ್ತಿಯಲ್ಲಿ ಟನ್‌ಗೆ ₹300 ದರದಲ್ಲಿ ಮರಳು ಲಭ್ಯವಿರಬೇಕು ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಆದರೆ ಕಂದಾಯ ಇಲಾಖೆ ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ ನಿರ್ಲಕ್ಷ ವಹಿಸಿರುವುದು ಅಕ್ರಮಕ್ಕೆ ಕಾರಣವಾಗಿದೆ.

ಸಾರ್ವಜನಿಕರು ಮನೆ ಕಟ್ಟಲಿಕ್ಕೆ ಅವಶ್ಯಕವಾಗಿ ಬೇಕಾಗಿರುವುದು ಮರಳು ಇದನ್ನು ಸರ್ಕಾರದ ವತಿಯಿಂದ ಪೂರೈಸಿದರೆ ಅಕ್ರಮ ಮರಳುಗಾರಿಕೆ ತಡೆಗಟ್ಟಬಹುದು ಆದರೆ ಇದರಲ್ಲಿ ಸರ್ಕಾರದ ನಿರ್ಲಕ್ಷ್ಯವೂ ಕಾರಣವಾಗಿದೆ,ಸರ್ಕಾರದ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿಗದಿತ ದರದಲ್ಲಿ ಪ್ಯಾಕೆಟ್ ಮೂಲಕ ಪೂರೈಸಿದರೆ ಸರ್ಕಾರಿ ಆದಾಯವು ಬರುತ್ತದೆ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಬಹುದು ಅಂತಾರೆ ತಜ್ಞರು.

ಅತಿಯಾದ ಗಣಿಗಾರಿಕೆಯಿಂದ ನದಿ ದಡಗಳ ಸವೆತ, ಪರಿಸರ ಹಾನಿ ಮತ್ತು ಸೇತುವೆಗಳ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ.

ಮರಳು ಗಣಿಗಾರಿಕೆಯ ಮೂಲಗಳು: ಹೆಚ್ಚಾಗಿ ನದಿ ತಳಗಳು, ಒಣ ನದಿ ಪಾತ್ರಗಳು, ಮತ್ತು ಕರಾವಳಿ ಪ್ರದೇಶಗಳಿಂದ ಮರಳು ತೆಗೆಯಲಾಗುತ್ತದೆ.

ಕರ್ನಾಟಕದ ಮರಳು ನೀತಿ (2020): ಗ್ರಾಮ ಪಂಚಾಯಿತಿಗಳ ಮೂಲಕ ಮರಳು ವಿಲೇವಾರಿ ಮಾಡಲು ಆದೇಶವಾಗಿರೋದು ಕೇವಲ ಆದೇಶವಾಗಿಯೇ ಉಳಿದಿದೆ ಆದರೆ ಜಾರಿಗೆ ಬಂದಿಲ್ಲ. ಇದರಲ್ಲಿ ಸಾರ್ವಜನಿಕರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ಕಡಿಮೆ ದರದಲ್ಲಿ ಮರಳು ದೊರೆಯುವಂತೆ ನೋಡಿಕೊಳ್ಳವುದಾಗಿದೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ: ಅಕ್ರಮವಾಗಿ ನಡೆಯುವ ಮರಳು ಸಾಗಣೆ ನದಿ ಪರಿಸರ ವ್ಯವಸ್ಥೆ ಮತ್ತು ಸೇತುವೆಗಳಿಗೆ ದೊಡ್ಡ ಅಪಾಯವನ್ನು ತಂದೊಡ್ಡುತ್ತಿದೆ.

ಪರಿಸರ ಪ್ರಭಾವ: ನದಿ ಪಾತ್ರದ ಗಣಿಗಾರಿಕೆಯು ನೀರಿನ ಲವಣಾಂಶ ಹೆಚ್ಚಳ, ಸಸ್ಯವರ್ಗದ ನಾಶ, ಮತ್ತು ಪ್ರವಾಹದಂತಹ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಬಹುದು.

ನಿಯಂತ್ರಣ ಕ್ರಮಗಳು: ಯಾಂತ್ರಿಕೃತ ದೋಣಿಗಳು (ಡ್ರೆಡ್ಜಿಂಗ್) ಮತ್ತು ಪೊಕ್ಲೇನ್ ಬಳಕೆಯನ್ನು ನಿಯಂತ್ರಿಸಲಾಗಿದೆ, ಮತ್ತು ಗಣಿಗಾರಿಕೆ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ಗಣಿ ಮತ್ತು ಉಪ ವಿಜ್ಞಾನ ಇಲಾಖೆ &ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತ, ಕಂದಾಯ ಇಲಾಖೆ,ಪೊಲೀಸ್ ಇಲಾಖೆ , ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಟಾರ್ಸ್ ಫೋರ್ಸ್ ಮೂಲಕ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿವೆ.

ಅಕ್ರಮ ಮರಳು ಕಣಿಗಾರಿಕೆ ಪರಿಣಾಮಗಳು:
ನದಿ ಪಾತ್ರದ ಆಳ ಹೆಚ್ಚಾಗುವುದು.ಭೂಗತ ಜಲಮಟ್ಟ ಕುಸಿತ.ಜಲಚರಗಳಿಗೆ ಅಪಾಯ.ಸೇತುವೆಗಳು ಮತ್ತು ಹೆದ್ದಾರಿಗಳಿಗೆ ಹಾನಿ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಜಿಲ್ಲಾಡಳಿತಗಳು ಮರಳು ಗಣಿಗಾರಿಕೆಗೆ ನಿಯಮಗಳನ್ನು ರೂಪಿಸಿ, ಅಕ್ರಮ ತಡೆಯಲು ಕ್ರಮ ಕೈಗೊಳ್ಳಬೇಕಾಗಿದೆ.

Hot this week

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

Topics

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ 25 ಗೋ ಗ್ಯಾಸ್ ಸೀಜ್…!

ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ...

HUBBALLI: ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ; ನಗರದಲ್ಲೇ ಅತಿ ದೊಡ್ಡ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ..!

ಹುಬ್ಬಳ್ಳಿ:ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡ ಕೆಲ ದುರುಳರು ತಮ್ಮ ಸ್ವಂತ ಲಾಭಕ್ಕೆ...

ವಿನೋದ್ ಅಸೂಟಿ ನೇತೃತ್ವದಲ್ಲಿ ನವಲಗುಂದ ಪಟ್ಟಣದಲ್ಲಿ ಭಕ್ತರಿಗೆ ನೀರು ವಿತರಣೆ ಕಾರ್ಯಕ್ರಮ

ನವಲಗುಂದ: ಕಲಿಯುಗದ ಕಾಮಧೇನು, ಬೇಡಿದ ವರವನ್ನು ದಯಪಾಲಿಸುವಂತಹ ಶ್ರೀ ರಾಮಲಿಂಗ ಕಾಮದೇವರ...

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ...

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಪಂದ್ಯ ನಡಿತಿರೋದು ಖುಷಿಯಿದೆ; ಪಡಿಕ್ಕಲ್

ನಾಳೆಯಿಂದ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​ ಪಂದ್ಯ ಪ್ರಾರಂಭಗೊಳ್ಳಲಿದ್ದು ಈ ಕುರಿತು ಕರ್ನಾಟಕ...

ಹುಬ್ಬಳ್ಳಿಯ ಸಂತೋಷ ಆರ್ ಶೆಟ್ಟಿಗೆ ‘ಶ್ರೀ ಮಂತ್ರಾಲಯ ಪರಿಮಳ’ ಪ್ರತಿಷ್ಠಿತ ಪ್ರಶಸ್ತಿ..!

ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹುಬ್ಬಳ್ಳಿ ನಿವಾಸಿ ಸಂತೋಷ...

ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ

ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಚರಣೆ...

ಡಿಜಿಟಲ್ ಮೀಡಿಯಾಗೆ ಶಿಫ್ಟ್ ಆದ ಜನರು: ಮೂರು ವರ್ಷದಲ್ಲಿ ಬಾಗಿಲು ಮುಚ್ಚಿದ 50 ಚಾನಲ್‌ ಗಳು..!

  ದೇಶದಲ್ಲಿ ಸಾರ್ಟ್ ಪೋನ್ ನಲ್ಲೇ ಈಗ ಎಲ್ಲವೂ ಸಿಗುತ್ತಿದೆ. ಅಂಗೈನಲ್ಲೇ ಜನರಿಗೆ...
spot_img

Related Articles

Popular Categories

spot_img
error: Content is protected !!