ಹುಬ್ಬಳ್ಳಿಯ ಸಿದ್ದೇಶ್ವರ ಪಾರ್ಕ್ ನಲ್ಲಿರುವ ಶಿವಸಾಗರ ಹೋಟೆಲ್ ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ವಾಣಿಜ್ಯ ಬಳಕೆಯ ಸಿಲಿಂಡರಗಳನ್ನ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..
ಪೊಲೀಸ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅವರು ಅನಿಲ ತುಂಬಿದ 25 ಸಿಲಿಂಡರ್ ಸಿಲಿಂಡರ್ ಪತ್ತೆ ಹಚ್ಚಿದ್ದಾರೆ.ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆ ಅಡಿಯಲ್ಲಿ ಹೋಟೆಲಿನ ಸಹ ಮಾಲೀಕ ಸತೀಶ್ ಬಂಡಿ ವಿರುದ್ಧ ಆಹಾರ ನೀರಿಕ್ಷಕ ವಿಜಯಕುಮಾರ ಪತ್ತಾರ ದೂರು ನೀಡಿದ್ದಾರೆ
ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲಗಳ ಸಿಲಿಂಡರಗಳನ್ನ ಶಿವಸಾಗರ ಹೋಟೆಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಲ್ಲಿಂದ ಪೂರೈಕೆಯಾಗಿದೆ ಹೇಗೆ ಪೂರೈಕೆಯಾಗಿದೆ ಅಕ್ರಮದ ಕಿಂಗ್ ಪಿನ್ ಯಾರು..?ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ಸರಬರಾಜು ಇಲಾಖೆ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ತಿಳಿಸಿದರು…



