ಹುಬ್ಬಳ್ಳಿಯ ನವನಗರದ ವಿದ್ಯಾಧಿರಾಜ ಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ 2000 ವಿದ್ಯಾರ್ಥಿಗಳಿಗೆ ಎಜುಕೇಶನ್ ಸ್ಕಾಲರ್ಶಿಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 2000 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇಂತಹ ಶೈಕ್ಷಣಿಕ ಸಹಾಯ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಂಪನಿಯ ಸಿಇಒ ಸುದರ್ಶನ ಮಾತನಾಡಿ ಈ ಮುಂಬರುವ ದಿನಗಳಲ್ಲಿ ಈ ಕಂಪನಿಯಿಂದ ಡಾಕ್ಟರ್ ಹಾಗೂ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ ಶಿಫ್ ಕೊಡುವ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ ಅಂತಾ ಹೇಳಿದ್ದು ಹೀಗೆ.
ಸದ್ಯ 2000 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡಿರೋ ಸಂಸ್ಥೆ ಮುಂಬರುವ ದಿನಗಳಲ್ಲಿ 20=ಸಾವಿರ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್ ನೀಡುವ ಮಟ್ಟಿಗೆ ಬೆಳೆಯಲಿ ಎಂಬುದು ಸ್ಕಾಲರ್ ಶಿಫ್ ಪಡೆದ ಮಕ್ಕಳ ಹಾಗೂ ಪೋಷಕರ ಒತ್ತಾಸೆಯಾಗಿದೆ




