ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಆಸಾರ ಓಣಿಯ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ರಸ್ತೆ ತೆರವುಗೊಳಿಸಿ ಪುಷ್ಕರಣಿ ಜಾಗವನ್ನು ಸಂರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಹಿನ್ನೆಲೆ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ನಿರ್ಬಂಧಾಜ್ಞೆ ಜಾರಿಗೊಳಿಸಲಾಗಿತ್ತು.
ಪುಷ್ಕರಣಿ ನಿಜವಾಗಿಯೂ ಇತ್ತೇ? ರಸ್ತೆ ನಿರ್ಮಾಣಕ್ಕೆ ಅನುಮತಿ ಹೇಗೆ ಸಿಕ್ಕಿತು? ಎಂಬ ಪ್ರಶ್ನೆಗಳಿಗೆ ದಾಖಲೆಗಳ ಆಧಾರದ ಮೇಲೆ ಉತ್ತರ ಸಿಗಬೇಕಿದೆ.




